7:05 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು ಪುನರ್ ನಾಮಕರಣ

16/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಹಾಸನ ಜಿಲ್ಲೆಯ ಬೇಲೂರು ನಲ್ಲಿ ಉಪಟಳ ನೀಡುತ್ತಿದ್ದ ಕರಡಿ ಹೆಸರಿನ ಆನೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗುತ್ತಿದ್ದು ಸಾರ್ವಜನಿಕ ದರ್ಶನಕ್ಕೆ ಸಿದ್ದಗೊಂಡಿದ್ದಾನೆ. ಬೇಲೂರಿನ ಸುತ್ತಮುತ್ತ ಸಾಕಷ್ಟು ಉಪಟಳ ನೀಡಿ ರಾಜ್ಯಾದ್ಯoತ ಸುದ್ದಿ ಮಾಡಿದ್ದ ಈ ಆನೆಯನ್ನು ಸ್ಥಳೀಯವಾಗಿ ಕರಡಿ ಆನೆ ಎಂದು ಗುರುತಿಸಲಾಗುತ್ತಿತ್ತು.

2024ರ ಏಪ್ರಿಲ್ 18ರಂದು ನಡೆದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಪ್ರಶಾಂತ, ಸುಗ್ರೀವ, ಭೀಮ, ಅಶ್ವತಾಮ, ಮಹೇಂದ್ರ ಸಾಕಾನೆಗಳ ಸತತ ಆನೆ ಕಾರ್ಯಾಚರಣೆಯಲ್ಲಿ ಸೆರೆಯಾದ ಕರಡಿ ಆನೆಯನ್ನು ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಮಾವುತ ಕರಿಯಪ್ಪ ಮತ್ತು ಕಾವಾಡಿ ಅನಿಶ್ ಅವರಿಂದ ಪಳಸಿಗಿದ್ದು ಕರಡಿ ಬದಲು “ಬಬ್ರುವಾಹನ” ಎಂದು ನಾಮಕರಣಗೊಂಡು ಸಾರ್ವಜನಿಕ ದರ್ಶನ ನೀಡಲಿದೆ. ಸತತವಾಗಿ ಒಂದು ವರ್ಷಗಳ ಕಾಲ 37 ವರ್ಷದ ಈ ಗಂಡಾನೆಯನ್ನು ಪಳಗಿಸಿ ಎಲ್ಲಾ ರೀತಿಯ ತರಬೇತಿ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು