1:16 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು ಪುನರ್ ನಾಮಕರಣ

16/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಹಾಸನ ಜಿಲ್ಲೆಯ ಬೇಲೂರು ನಲ್ಲಿ ಉಪಟಳ ನೀಡುತ್ತಿದ್ದ ಕರಡಿ ಹೆಸರಿನ ಆನೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗುತ್ತಿದ್ದು ಸಾರ್ವಜನಿಕ ದರ್ಶನಕ್ಕೆ ಸಿದ್ದಗೊಂಡಿದ್ದಾನೆ. ಬೇಲೂರಿನ ಸುತ್ತಮುತ್ತ ಸಾಕಷ್ಟು ಉಪಟಳ ನೀಡಿ ರಾಜ್ಯಾದ್ಯoತ ಸುದ್ದಿ ಮಾಡಿದ್ದ ಈ ಆನೆಯನ್ನು ಸ್ಥಳೀಯವಾಗಿ ಕರಡಿ ಆನೆ ಎಂದು ಗುರುತಿಸಲಾಗುತ್ತಿತ್ತು.

2024ರ ಏಪ್ರಿಲ್ 18ರಂದು ನಡೆದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಪ್ರಶಾಂತ, ಸುಗ್ರೀವ, ಭೀಮ, ಅಶ್ವತಾಮ, ಮಹೇಂದ್ರ ಸಾಕಾನೆಗಳ ಸತತ ಆನೆ ಕಾರ್ಯಾಚರಣೆಯಲ್ಲಿ ಸೆರೆಯಾದ ಕರಡಿ ಆನೆಯನ್ನು ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಮಾವುತ ಕರಿಯಪ್ಪ ಮತ್ತು ಕಾವಾಡಿ ಅನಿಶ್ ಅವರಿಂದ ಪಳಸಿಗಿದ್ದು ಕರಡಿ ಬದಲು “ಬಬ್ರುವಾಹನ” ಎಂದು ನಾಮಕರಣಗೊಂಡು ಸಾರ್ವಜನಿಕ ದರ್ಶನ ನೀಡಲಿದೆ. ಸತತವಾಗಿ ಒಂದು ವರ್ಷಗಳ ಕಾಲ 37 ವರ್ಷದ ಈ ಗಂಡಾನೆಯನ್ನು ಪಳಗಿಸಿ ಎಲ್ಲಾ ರೀತಿಯ ತರಬೇತಿ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು