6:03 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು ಪುನರ್ ನಾಮಕರಣ

16/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಹಾಸನ ಜಿಲ್ಲೆಯ ಬೇಲೂರು ನಲ್ಲಿ ಉಪಟಳ ನೀಡುತ್ತಿದ್ದ ಕರಡಿ ಹೆಸರಿನ ಆನೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗುತ್ತಿದ್ದು ಸಾರ್ವಜನಿಕ ದರ್ಶನಕ್ಕೆ ಸಿದ್ದಗೊಂಡಿದ್ದಾನೆ. ಬೇಲೂರಿನ ಸುತ್ತಮುತ್ತ ಸಾಕಷ್ಟು ಉಪಟಳ ನೀಡಿ ರಾಜ್ಯಾದ್ಯoತ ಸುದ್ದಿ ಮಾಡಿದ್ದ ಈ ಆನೆಯನ್ನು ಸ್ಥಳೀಯವಾಗಿ ಕರಡಿ ಆನೆ ಎಂದು ಗುರುತಿಸಲಾಗುತ್ತಿತ್ತು.

2024ರ ಏಪ್ರಿಲ್ 18ರಂದು ನಡೆದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಪ್ರಶಾಂತ, ಸುಗ್ರೀವ, ಭೀಮ, ಅಶ್ವತಾಮ, ಮಹೇಂದ್ರ ಸಾಕಾನೆಗಳ ಸತತ ಆನೆ ಕಾರ್ಯಾಚರಣೆಯಲ್ಲಿ ಸೆರೆಯಾದ ಕರಡಿ ಆನೆಯನ್ನು ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಮಾವುತ ಕರಿಯಪ್ಪ ಮತ್ತು ಕಾವಾಡಿ ಅನಿಶ್ ಅವರಿಂದ ಪಳಸಿಗಿದ್ದು ಕರಡಿ ಬದಲು “ಬಬ್ರುವಾಹನ” ಎಂದು ನಾಮಕರಣಗೊಂಡು ಸಾರ್ವಜನಿಕ ದರ್ಶನ ನೀಡಲಿದೆ. ಸತತವಾಗಿ ಒಂದು ವರ್ಷಗಳ ಕಾಲ 37 ವರ್ಷದ ಈ ಗಂಡಾನೆಯನ್ನು ಪಳಗಿಸಿ ಎಲ್ಲಾ ರೀತಿಯ ತರಬೇತಿ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು