11:28 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Kodagu | ಮುಂದುವರಿದ ವ್ಯಾಘ್ರ ಹಾವಳಿ: ವಿರಾಜಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ

27/07/2025, 23:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ಕೊಂದು ಸ್ವಲ್ಪ ಭಾಗ ತಿಂದು ಹಾಕಿದ ಘಟನೆ ನಡೆದಿದೆ.
ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸು ಕಾಣೆಯಾಗಿ ನೆನ್ನೆಯಿಂದ ಹುಡುಕಿ ಇಂದು ಪಕ್ಕದ ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದೆ.

ಅಂದಾಜು 15 ಲೀಟರ್ನಷ್ಟು ಹಾಲು ಕೊಡುತ್ತಿದ್ದ ಹಸು ಹುಲಿ ದಾಳಿಗೆ ಬಲಿಯಾಗಿದ್ದು ಬೋಪಣ್ಣನವರು ಕಂಗೆಡುವಂತೆ ಮಾಡಿದೆ, ಸುತ್ತ ಮುತ್ತಲಿನ ಜನರು ಕೂಡ ಇನ್ನು ಮುಂದೆ ಹುಲಿಯ ಭಯದಲ್ಲೇ ಕಾಲ ಕಳೆಯುವಂತಾಗಿದೆ, ಜನ ಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಕೋರಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು