6:47 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

16/10/2025, 10:01

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnatkaka@gmail.com

ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯದಿಂದ ಬುಧವಾರ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದರು. ಬಳಿಕ ದೇವಾಲಯದ ಸುತ್ತ ಚಂಡೆ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತಿಗೆ ತೊಡಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೊಟ್ಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿದ್ದು ಪ್ರತಿ ದಿನ ಮಾತಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿಮಾತೆ ಕಂಗೊಳಿಸಲಿದ್ದಾಳೆ.ಕಿರು ಸಂಕ್ರಮಣದ ಬಳಿಕ ಚಿನ್ನಾಭರಗಳನ್ನು ತಂದು ಆಡಳಿತಾಧಿಕಾರಿಗೆ ಒಪ್ಪಿಸಲಿದ್ದಾರೆ.


ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್ ,ಪಾರುಪತ್ಯೆಗಾರ ಪೊಣ್ಣಣ್ಣ,ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗರ ಹರ್ಷ,ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ನಗರಸಭಾ ಸದಸ್ಯ ಶ್ವೇತಪ್ರಾಶತ್ ಕೊಡಗು ಗೌಡಯುವ ವೇದಿಕೆಯ ಸೋನಿಯಾ ಶರತ್ , ಕೊಡಗುಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯನಂದ, ದಂಬೆಕೊಡಿ ಆನಂದ,ಕುಟ್ಟನ ಸುದೀಪ್,ಪೈಕೆರ ಮನೋಹರ್, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಕಾರ್ಯದರ್ಶಿ ಚಲನ್, ಭಾಗಮಂಡಲ ದೇವಸ್ಥಾನದ ನಾಡು ತಕ್ಕರಾದ ಬಾರಿಕೆ ಮತ್ತು ನಂಗಾರು ಕುಟುಂಬಸ್ಥರು, ದೇಶ ತಕ್ಕರಾದ ಕುದುಪಜೆಮತ್ತು ಸೂರ್ತಲೆ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು