11:11 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

16/10/2025, 10:01

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnatkaka@gmail.com

ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯದಿಂದ ಬುಧವಾರ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದರು. ಬಳಿಕ ದೇವಾಲಯದ ಸುತ್ತ ಚಂಡೆ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತಿಗೆ ತೊಡಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೊಟ್ಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿದ್ದು ಪ್ರತಿ ದಿನ ಮಾತಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿಮಾತೆ ಕಂಗೊಳಿಸಲಿದ್ದಾಳೆ.ಕಿರು ಸಂಕ್ರಮಣದ ಬಳಿಕ ಚಿನ್ನಾಭರಗಳನ್ನು ತಂದು ಆಡಳಿತಾಧಿಕಾರಿಗೆ ಒಪ್ಪಿಸಲಿದ್ದಾರೆ.


ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್ ,ಪಾರುಪತ್ಯೆಗಾರ ಪೊಣ್ಣಣ್ಣ,ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗರ ಹರ್ಷ,ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ನಗರಸಭಾ ಸದಸ್ಯ ಶ್ವೇತಪ್ರಾಶತ್ ಕೊಡಗು ಗೌಡಯುವ ವೇದಿಕೆಯ ಸೋನಿಯಾ ಶರತ್ , ಕೊಡಗುಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯನಂದ, ದಂಬೆಕೊಡಿ ಆನಂದ,ಕುಟ್ಟನ ಸುದೀಪ್,ಪೈಕೆರ ಮನೋಹರ್, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಕಾರ್ಯದರ್ಶಿ ಚಲನ್, ಭಾಗಮಂಡಲ ದೇವಸ್ಥಾನದ ನಾಡು ತಕ್ಕರಾದ ಬಾರಿಕೆ ಮತ್ತು ನಂಗಾರು ಕುಟುಂಬಸ್ಥರು, ದೇಶ ತಕ್ಕರಾದ ಕುದುಪಜೆಮತ್ತು ಸೂರ್ತಲೆ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು