6:59 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್. ಜನಾರ್ದನ್ ನೇಮಕ

07/03/2024, 23:53

ಬೆಳ್ತಂಗಡಿ(reporterkarnataka.com): ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ನೇಮಕಗೊಂಡಿದ್ದಾರೆ.
ಅವರು ರುಡ್ ಸೆಟ್ ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560ಕ್ಕೂ ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು. ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕೂ ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿ ಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಅವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅಲ್ಲದೆ ಪ್ರಸ್ತುತ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು