7:31 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

19/02/2026, 13:58

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆಗಳ ಆವಾಸ ತಾಣವಾಗಿರುವ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮೇಲೆ ದಾಳಿ ನಡೆಸಿದ್ದು ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸಿದ್ದಾಪುರ ಸಮೀಪದ ಕೆಸುವಿನಹಳ್ಳ ಬಳಿ ಅಮ್ಮತ್ತಿಯ ಪುಲಿಯೇರಿ ಗ್ರಾಮದ ಪ್ರಜಿತ್ ಮೈಸೂರು ಕಡೆಯಿಂದ ಬರುತ್ತಿದ್ದ ವೇಳೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತಕ್ಷಣ ರಸ್ತೆಯಲ್ಲೇ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಹಿಂಭಾಗಕ್ಕೆ ಬಂದ ಒಂಟಿ ಸಲಗ ಕಾರಿನ ಮೇಲೆ ದಾಳಿ ನಡೆಸಿ ಕಾರನ್ನು ನಜ್ಜು ಗುಜ್ಜು ಮಾಡಿದೆ, ಸಂಪೂರ್ಣ ಘಟನೆ ನಡೆಯುವ ವರೆಗೂ ಆತಂಕದಲ್ಲೇ ಕಾರಿನಲ್ಲೇ ಕುಳಿತಿದ್ದ ಪ್ರಜಿತ್ ಮತ್ತು ಇತರೆ ಪ್ರಯಾಣಿಕರು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರಸ್ತೆ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಅರಣ್ಯ ಇಲಾಖೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡದೆ ಇರುವುದು ದುರಂತ.

ಇತ್ತೀಚಿನ ಸುದ್ದಿ

ಜಾಹೀರಾತು