5:14 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ

07/07/2024, 15:43

ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.


5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ‌ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿತ್ತು. ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮೆರಾ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕರು ಈ ಕುರಿತು ಜಾಗ್ರತೆ ವಹಿಸಬೇಕು. ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112 ಗೆ ಮಾಹಿತಿ ನೀಡಬೇಕು. ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಪ್ರವೇಶ ದಾರಿ ಕಾಣುವ ಹಾಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ, ರಾತ್ರಿಯ ದೃಶ್ಯಗಳು ಸ್ಪಷ್ಟವಾಗಿ ಕಾಣುವ ಹಾಗೆ ಮತ್ತು ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು