10:26 PM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕೋಡಿಕಲ್ 17ನೇ ಮೇಯರ್ ವಾರ್ಡ್ ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ

02/02/2025, 16:54

ಸುರತ್ಕಲ್ (reporterkarnataka.com): ಮಂಗಳೂರು ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಭಾನುವಾರ ನಡೆಯಿತು.


ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ,
ಬಾಬಾ ಸಾಹೇಬ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಸಮಾಜದಲ್ಲಿ ಶಿಕ್ಷಣದೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಅವರ ಹೆಸರಿನಲ್ಲಿ ನಿರ್ಮಾಣವಾದ ಈ ಸಮಾಜ ಭವನದಲ್ಲಿ ಶಿಕ್ಷಣ ತರಬೇತಿ,ಉದ್ಯೋಗ, ಮತ್ತಿತರ ತರಬೇತಿಗಳು,
ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಪ್ರಯೋಜನವಾಗಲಿ ಎಂದರು. ಇದೇ ಸಂದರ್ಭ ಭವನವನ್ನು ಪೂರ್ಣಗೊಳಿಸಲು ಬೇಕಾದ ಕ್ರಮ ಕೈಗೊಂಡ ಮೇಯರ್ ಮನೋಜ್ ಕುಮಾರ್ ಅವರನ್ನು ಅಭಿನಂದಿಸಿದರು.
ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಮಾಜ ಭವನ ನಿರ್ಮಾಣಕ್ಕೆ ಹಲವು ಅಡ್ಡಿ ಆತಂಕ ಎದುರಾಗಿತ್ತು.ತಾನು ಪಾಲಿಕೆ ಸದಸ್ಯನಾದ ಬಳಿಕ
ಪೂರ್ಣಗೊಳಿಸಲು ಕೊರೊನಾ ಅಡಚಣೆ ಹಾಗೂ ಆರ್ಥಿಕ ಸಮಸ್ಯೆ ಮತ್ತೆ ಎದುರಾಗಿತ್ತು.ಸಮಾಜ ಕಲ್ಯಾಣ ಇಲಾಖೆಯಿಂದಲೂ ಅನುದಾನ ತಾಂತ್ರಿಕ ಕಾರಣದಿಂದ ಸಿಗಲಿಲ್ಲ.ಕೊನೆಗೆ ಪಾಲಿಕೆ ಸಾಮಾನ್ಯ ನಿಧಿ ಹಾಗೂ ಮೀಸಲು 24.10 ನಿಧಿಯಿಂದ ಹಣ ಒದಗಿಸಿ ಇದೀಗ ಪೂರ್ಣಗೊಳಿಸಲಾಗಿದೆ. ಪ.ಜಾ, ಪಂಗಡ ,ಇತರ ಪಂಗಡ ಹಾಗೂ ಇತರರಿಗೂ ಈ ಸಮಾಜ ಭವನದಲ್ಲಿ ಕಡಿಮೆ ಶುಲ್ಕದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗುವುದು.ಇದರಿಂದ ಪಾಲಿಕೆಗೂ ಆದಾಯ ಬರುವಂತಾಗುತ್ತದೆ.ಸಮಾಜ ಮುಖೀ ಚಟುವಟಿಕೆಗೂ ಈ ಭವನ ಸದುಪಯೋಗವಾಗಲಿ ಎಂದು ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಲಕ್ಷ್ಮಿ ,ಕಿರಣ್ ಕುಮಾರ್ ಕೋಡಿಕಲ್
ಕೋಡಿಕಲ್ ಎಸ್ ಎನ್ ಡಿ ಪಿ ಮಂದಿರದ
ಸಂಚಾಲಕರಾದ ಪುರುಷೋತ್ತಮ್ ಪೂಜಾರಿ, ಮುಂಡಾಲ ಯುವ ವೇದಿಕೆಯ ಪ್ರದೀಪ್ ಕಾಪಿಕಾಡ್, ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿಯ ಚಂದ್ರಕುಮಾರ್ ,ಡಾ. ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಚಂದ್ರಹಾಸ್ ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು