12:38 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು