7:06 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು