6:47 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು