1:49 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೊಡಿಯಾಲಬೈಲ್ ವಾರ್ಡ್: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

20/01/2023, 22:46

ಮಂಗಳೂರು(reporterkarnataka.com) ಮಹಾನಗರ ಪಾಲಿಕೆಯ ಕೊಡಿಯಾಲಬೈಲ್ ವಾರ್ಡಿನ ಶ್ರೀದೇವಿ ಕಾಲೇಜಿನ ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಲ್ಲಾಳ್ ಭಾಗ್ ಶ್ರೀದೇವಿ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಮುಖ್ಯರಸ್ತೆ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಂಡಿದ್ದು ಸ್ಥಳೀಯರ ಸಹಕಾರದಿಂದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವ ಭರವಸೆಯಿದೆ ಎಂದು ಹೇಳಿದರು.

ಸ್ಥಳೀಯ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಮಾತನಾಡಿ,ಕೊಡಿಯಾಲಬೈಲ್ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕರ ಕೊಡುಗೆ ಅಪಾರವಾಗಿದೆ. ಜನರ ಬೇಡಿಕೆಗಳಿಗೆ ತ್ವರಿತವಾಗಿ‌ ಸ್ಪಂದಿಸುವ ಮೂಲಕ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಸದಾ ಸಹಕಾರ ನೀಡುತಿದ್ದಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ‌ ಕಾವಾ, ಕಿಶೋರ್ ಕೊಟ್ಟಾರಿ, ಮುಖಂಡರಾದ ಗಂಗಾಧರ್, ಚಂದ್ರಶೇಖರ್, ಲೋಕನಾಥ್ ಶೆಟ್ಟಿ, ಪ್ರಶಾಂತ್ ಆಳ್ವ, ಜಗನಾಥ ಶೆಟ್ಟಿ, ಭಾರತೀ ಶೆಟ್ಟಿ, ಯಶವಂತ್ ಕುದ್ರೋಳಿ, ವಿವೇಕ್ ದೇವಾಡಿಗ, ವಸಂತ್ ಜೆ. ಪೂಜಾರಿ, ಸದಾಶಿವ ಕುಲಾಲ್, ನವೀನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು