6:00 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೊಡ್ಮಣ್: ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

21/02/2022, 16:12

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಪರಿಚಯವನ್ನು ಮಾಡಿಸುವುದರ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಪರ್ಯಾಯ ಖಜಾಂಚಿಗಳಾದ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು.

ಅವರು ಕೆನರಾ ಕಾಲೇಜಿನ ಎನ್ ಎಸ್ ಎಸ್ ಘಟಕವು “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿಯಲ್ಲಿ ಕೊಡ್ಮಣ್ ನ ದ.ಕ.ಜಿ.ಪ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಡ್ಮಣ್ ಕಾಂತಪ್ಪ ಶೆಟ್ಟಿಯವರು ಮಾತನಾಡುತ್ತಾ ಮೂವತ್ನಾಲ್ಕು ವರ್ಷಗಳ ತಮ್ಮ ಹಾಗೂ ಕೆನರಾ ಕಾಲೇಜಿನ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಳ್ಳುತ್ತಾ,ಕುಗ್ರಾಮವಾಗಿದ್ದ ಕೊಡ್ಮಣ್ ಗ್ರಾಮದ ಅಭಿವೃದ್ಧಿಯಲ್ಲಿ ಕೆನರಾ ಕಾಲೇಜಿನ ವಿದ್ಯಾರ್ಥಿಗಳ ಕೊಡುಗೆ ಅನನ್ಯ ಎಂದು ಶ್ಲಾಘಿಸಿದರು.

ಮೇರಮಜಲು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ  ಪದ್ಮನಾಭ ಶೆಟ್ಟಿ ಕೊಟ್ಟಿಂಜ, ಕೊಡ್ಮಣ್ ಸರಕಾರಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಾಮಚಂದ್ರ ರಾವ್, ಲಕ್ಷ್ಮೀಕಾಂತ ನಾಯಕ್ ಕೊಡ್ಮಣ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ರಮೇಶ್ ಬಂಗೇರ,ಮಾತೃಮಂಡಳಿ ಸದಸ್ಯರಾದ ವೀಣಾ ಕೊಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮಲತಾ ವಿ.ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ರಾಸೆಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಸ್ವಾಗತಿಸಿ,ವಾಣಿ ಯು.ಎಸ್.ವಂದಿಸಿದರು.ಸ್ವಯಂ ಸೇವಕಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು