4:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊಡ್ಮಣ್: ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

21/02/2022, 16:12

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಪರಿಚಯವನ್ನು ಮಾಡಿಸುವುದರ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಪರ್ಯಾಯ ಖಜಾಂಚಿಗಳಾದ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು.

ಅವರು ಕೆನರಾ ಕಾಲೇಜಿನ ಎನ್ ಎಸ್ ಎಸ್ ಘಟಕವು “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿಯಲ್ಲಿ ಕೊಡ್ಮಣ್ ನ ದ.ಕ.ಜಿ.ಪ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಡ್ಮಣ್ ಕಾಂತಪ್ಪ ಶೆಟ್ಟಿಯವರು ಮಾತನಾಡುತ್ತಾ ಮೂವತ್ನಾಲ್ಕು ವರ್ಷಗಳ ತಮ್ಮ ಹಾಗೂ ಕೆನರಾ ಕಾಲೇಜಿನ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಳ್ಳುತ್ತಾ,ಕುಗ್ರಾಮವಾಗಿದ್ದ ಕೊಡ್ಮಣ್ ಗ್ರಾಮದ ಅಭಿವೃದ್ಧಿಯಲ್ಲಿ ಕೆನರಾ ಕಾಲೇಜಿನ ವಿದ್ಯಾರ್ಥಿಗಳ ಕೊಡುಗೆ ಅನನ್ಯ ಎಂದು ಶ್ಲಾಘಿಸಿದರು.

ಮೇರಮಜಲು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ  ಪದ್ಮನಾಭ ಶೆಟ್ಟಿ ಕೊಟ್ಟಿಂಜ, ಕೊಡ್ಮಣ್ ಸರಕಾರಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಾಮಚಂದ್ರ ರಾವ್, ಲಕ್ಷ್ಮೀಕಾಂತ ನಾಯಕ್ ಕೊಡ್ಮಣ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ರಮೇಶ್ ಬಂಗೇರ,ಮಾತೃಮಂಡಳಿ ಸದಸ್ಯರಾದ ವೀಣಾ ಕೊಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮಲತಾ ವಿ.ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ರಾಸೆಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಸ್ವಾಗತಿಸಿ,ವಾಣಿ ಯು.ಎಸ್.ವಂದಿಸಿದರು.ಸ್ವಯಂ ಸೇವಕಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು