11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊಡ್ಮಣ್: ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

21/02/2022, 16:12

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಪರಿಚಯವನ್ನು ಮಾಡಿಸುವುದರ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಪರ್ಯಾಯ ಖಜಾಂಚಿಗಳಾದ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು.

ಅವರು ಕೆನರಾ ಕಾಲೇಜಿನ ಎನ್ ಎಸ್ ಎಸ್ ಘಟಕವು “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿಯಲ್ಲಿ ಕೊಡ್ಮಣ್ ನ ದ.ಕ.ಜಿ.ಪ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಡ್ಮಣ್ ಕಾಂತಪ್ಪ ಶೆಟ್ಟಿಯವರು ಮಾತನಾಡುತ್ತಾ ಮೂವತ್ನಾಲ್ಕು ವರ್ಷಗಳ ತಮ್ಮ ಹಾಗೂ ಕೆನರಾ ಕಾಲೇಜಿನ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಳ್ಳುತ್ತಾ,ಕುಗ್ರಾಮವಾಗಿದ್ದ ಕೊಡ್ಮಣ್ ಗ್ರಾಮದ ಅಭಿವೃದ್ಧಿಯಲ್ಲಿ ಕೆನರಾ ಕಾಲೇಜಿನ ವಿದ್ಯಾರ್ಥಿಗಳ ಕೊಡುಗೆ ಅನನ್ಯ ಎಂದು ಶ್ಲಾಘಿಸಿದರು.

ಮೇರಮಜಲು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ  ಪದ್ಮನಾಭ ಶೆಟ್ಟಿ ಕೊಟ್ಟಿಂಜ, ಕೊಡ್ಮಣ್ ಸರಕಾರಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಾಮಚಂದ್ರ ರಾವ್, ಲಕ್ಷ್ಮೀಕಾಂತ ನಾಯಕ್ ಕೊಡ್ಮಣ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ರಮೇಶ್ ಬಂಗೇರ,ಮಾತೃಮಂಡಳಿ ಸದಸ್ಯರಾದ ವೀಣಾ ಕೊಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮಲತಾ ವಿ.ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ರಾಸೆಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಸ್ವಾಗತಿಸಿ,ವಾಣಿ ಯು.ಎಸ್.ವಂದಿಸಿದರು.ಸ್ವಯಂ ಸೇವಕಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು