11:20 AM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ

24/07/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. 

ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ್ಬಿನ ಗದ್ದೆಗಳಿಗೆ ನುಗ್ಗಿದ ನೀರು ಅನೇಕ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟು ಮಾಡಿದೆ.


ಪ್ರವಾಹ ಮುನ್ಸೂಚನೆ ನೀಡಿದ ಜಿಲ್ಲಾಡಳಿತ ಕುರಿತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಇದೇ ವೇಳೆ ಕರ್ನಾಟಕ ರೈತ ಸಂಘ ಹಾಗೂ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ ಮಾದೇವ್ ಮಡಿವಾಳ ಮಾತನಾಡಿ, ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡುತ್ತೇವೆ ಎಂದು ಮಹಾರಾಷ್ಟ್ರ ಸರಕಾರ ಜಿಲ್ಲಾಡಳಿತಕ್ಕೆ ತಿಳಿಸಿದ್ದರೂ ಜಿಲ್ಲಾಡಳಿತ ಜನರಿಗೆ ಈ ಕುರಿತು ಮಾಹಿತಿ ನೀಡಿಲ್ಲ. ರೈತರ 500ಕ್ಕೂ ಹೆಚ್ಚು ಪಂಪ್ಸೆಟ್ ಗಳು ನೀರಿನಲ್ಲಿ ಮುಳುಗಿದ್ದು ಇದರಿಂದ ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೇ  ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಜನರ ಸೇವೆಗೆ ಮುಂದಾಗಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು