6:34 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ

24/07/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. 

ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ್ಬಿನ ಗದ್ದೆಗಳಿಗೆ ನುಗ್ಗಿದ ನೀರು ಅನೇಕ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟು ಮಾಡಿದೆ.


ಪ್ರವಾಹ ಮುನ್ಸೂಚನೆ ನೀಡಿದ ಜಿಲ್ಲಾಡಳಿತ ಕುರಿತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಇದೇ ವೇಳೆ ಕರ್ನಾಟಕ ರೈತ ಸಂಘ ಹಾಗೂ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ ಮಾದೇವ್ ಮಡಿವಾಳ ಮಾತನಾಡಿ, ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡುತ್ತೇವೆ ಎಂದು ಮಹಾರಾಷ್ಟ್ರ ಸರಕಾರ ಜಿಲ್ಲಾಡಳಿತಕ್ಕೆ ತಿಳಿಸಿದ್ದರೂ ಜಿಲ್ಲಾಡಳಿತ ಜನರಿಗೆ ಈ ಕುರಿತು ಮಾಹಿತಿ ನೀಡಿಲ್ಲ. ರೈತರ 500ಕ್ಕೂ ಹೆಚ್ಚು ಪಂಪ್ಸೆಟ್ ಗಳು ನೀರಿನಲ್ಲಿ ಮುಳುಗಿದ್ದು ಇದರಿಂದ ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೇ  ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಜನರ ಸೇವೆಗೆ ಮುಂದಾಗಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು