7:10 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್‌ಬುಕ್‌ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್

05/02/2024, 21:53

ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ.
ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು.
ಬಂಟ್ವಾಳ ತಾಲೂಕಿನ ಪನೋಲಿ ಬೈಲ್‌ನಲ್ಲಿ ನಡೆದ ಕೋಲದಲ್ಲಿ ಭಾಗವಹಿಸಿದ್ದ ಯು.ಟಿ.ಖಾದರ್ ನಡೆಯನ್ನು ಖಂಡಿಸಿ ಸಾಲೆತ್ತೂರು ಫೈಝಿ ಅಲ್ ಹಮ್ಹಾನಿ ಎಂಬವರು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕೋಲಕ್ಕೆ ಹೋಗುವುದು ನಮ್ಮ ಸಂಸ್ಕತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಖಾದರ್ ನುಡಿದರು.
ಸಾಮಾಜಿಕ ಜಾಲತಾಣದಲ್ಲಿ ಗೀಚುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಪ್ರಶ್ನೆ ಕೇಳುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಯಾರು ಕೆಲಸ ಮಾಡುತ್ತಾರೆ, ಯಾರು ಉತ್ತರ ಕೊಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದು ಖಾದ‌ರ್ ಹೇಳಿದರು.
ಆ ಒಬ್ಬನಿಗೆ ಯಾಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದ ಅವರು, ಅದರ ಅಗತ್ಯವು ಇಲ್ಲ. ಶೇ.99ರಷ್ಟು ಜನರು ಎಲ್ಲ ಧರ್ಮಗಳಿಗೆ ಗೌರವ ನೀಡುತ್ತಾ ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು