1:46 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್‌ಬುಕ್‌ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್

05/02/2024, 21:53

ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ.
ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು.
ಬಂಟ್ವಾಳ ತಾಲೂಕಿನ ಪನೋಲಿ ಬೈಲ್‌ನಲ್ಲಿ ನಡೆದ ಕೋಲದಲ್ಲಿ ಭಾಗವಹಿಸಿದ್ದ ಯು.ಟಿ.ಖಾದರ್ ನಡೆಯನ್ನು ಖಂಡಿಸಿ ಸಾಲೆತ್ತೂರು ಫೈಝಿ ಅಲ್ ಹಮ್ಹಾನಿ ಎಂಬವರು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕೋಲಕ್ಕೆ ಹೋಗುವುದು ನಮ್ಮ ಸಂಸ್ಕತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಖಾದರ್ ನುಡಿದರು.
ಸಾಮಾಜಿಕ ಜಾಲತಾಣದಲ್ಲಿ ಗೀಚುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಪ್ರಶ್ನೆ ಕೇಳುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಯಾರು ಕೆಲಸ ಮಾಡುತ್ತಾರೆ, ಯಾರು ಉತ್ತರ ಕೊಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದು ಖಾದ‌ರ್ ಹೇಳಿದರು.
ಆ ಒಬ್ಬನಿಗೆ ಯಾಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದ ಅವರು, ಅದರ ಅಗತ್ಯವು ಇಲ್ಲ. ಶೇ.99ರಷ್ಟು ಜನರು ಎಲ್ಲ ಧರ್ಮಗಳಿಗೆ ಗೌರವ ನೀಡುತ್ತಾ ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು