8:49 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆ: ಮೂವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

03/01/2025, 15:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterlarnataka@gmail.com

ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್‌ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿ ಅಧ್ಯಕ್ಷರು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ವಾಸುದೇವ ಹೊಳ್ಳ ಅವರಿಗೆ 2023ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಹಾಗೂ ಹಾಬಿ ರಮೇಶ್‌ ಅವರಿಗೆ 2024ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಒಲಿದಿದೆ.
ಓಂಕಾರ ಮೂರ್ತಿ ಅವರು ಅಕಾಡೆಮಿಯ 2024ನೇ ಸಾಲಿನ ‘ಅಭಿಮಾನಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಕೆರೆ ಒಡಲಿಗೆ ಬೆಂಗಳೂರಿನ ಚರಂಡಿ ನೀರು; ತರಕಾರಿ ಗುಣಮಟ್ಟ ಕುಸಿತ, ಅವಳಿ ವ್ಯಾಲಿಯಲ್ಲಿ ಅಪಾಯ’ ವಿಶೇಷ ವರದಿಗೆ ಈ ಪ್ರಶಸ್ತಿ ಒಲಿದಿದೆ.
ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್‌, ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಚಂದ್ರಶೇಖರ್‌, ಖಜಾಂಚಿ ಎ.ಜಿ.ಸುರೇಶ್‌ ಕುಮಾರ್‌ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು