12:33 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆ: ಮೂವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

03/01/2025, 15:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterlarnataka@gmail.com

ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್‌ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿ ಅಧ್ಯಕ್ಷರು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ವಾಸುದೇವ ಹೊಳ್ಳ ಅವರಿಗೆ 2023ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಹಾಗೂ ಹಾಬಿ ರಮೇಶ್‌ ಅವರಿಗೆ 2024ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಒಲಿದಿದೆ.
ಓಂಕಾರ ಮೂರ್ತಿ ಅವರು ಅಕಾಡೆಮಿಯ 2024ನೇ ಸಾಲಿನ ‘ಅಭಿಮಾನಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಕೆರೆ ಒಡಲಿಗೆ ಬೆಂಗಳೂರಿನ ಚರಂಡಿ ನೀರು; ತರಕಾರಿ ಗುಣಮಟ್ಟ ಕುಸಿತ, ಅವಳಿ ವ್ಯಾಲಿಯಲ್ಲಿ ಅಪಾಯ’ ವಿಶೇಷ ವರದಿಗೆ ಈ ಪ್ರಶಸ್ತಿ ಒಲಿದಿದೆ.
ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್‌, ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಚಂದ್ರಶೇಖರ್‌, ಖಜಾಂಚಿ ಎ.ಜಿ.ಸುರೇಶ್‌ ಕುಮಾರ್‌ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು