7:23 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ 

16/04/2022, 13:16

ಶಬೀರ್ ಅಹಮ್ಮದ್  ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ  ಏರ್ಪಡಿಸಿದ್ದ ಸೀತಾರಾಮ ಕಲ್ಯಾಣೋತ್ಸವ ಸಮಾರಂಭದಲ್ಲಿ ಗ್ರಾಮದ ಅಲ್ಪ ಸಂಖ್ಯಾತರಿಗೆ ವಿವಿಧ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.

ಯಚ್ಚನಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯವಾದ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಎರಡನೇ ಹಂತದಲ್ಲಿ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರ್ಕಾರ ರೂ .450 ಕೋಟಿ ಬಿಡುಗಡೆ ಮಾಡಿದೆ . ಮುದುವಾಡಿ ಕೆರೆಯಿಂದ ಯಚ್ಚನಹಳ್ಳಿ ಗ್ರಾಮಕ್ಕೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು . ಈ ಕೆರೆಯಿಂದ ಉಳಿದ ಕೆರೆಗಳಿಗೆ ನೀರು ಹರಿಸಲಾಗುವುದು . ತಾಲ್ಲೂಕಿನ 100 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ . ಶ್ರಮ ಶಕ್ತಿ ಯೋಜನೆಯಡಿ ಗ್ರಾಮದ 90 ಅಲ್ಪ ಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ ರೂ .10 ಸಾವಿರ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು . ಬಿಜೆಪಿ ಸರ್ಕಾರ ಅಲ್ಪಸಖ್ಯಾತರ ಹಿತ ಕಾಯಲು ಬದ್ಧವಾಗಿದೆ . ಬಿಜೆಪಿ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ . ಕಾಂಗ್ರೆಸ್ ಮತದಾಸೆಗಾಗಿ ಅವರನ್ನು ದಾರಿತಪ್ಪಿಸುತ್ತಿದೆ . ಬಿಜೆಪಿ ದೇಶ ವಿರೋಧಿಗಳನ್ನು ವಿರೋಧಿ ಸುತ್ತದೆಯೇ ಹೊರತು ಅಲ್ಪ ಸಂಖ್ಯಾತರನ್ನಲ್ಲ . ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಹಿತದೃಷ್ಟಿ ಯಿಂದ ತಲಾಖ್ ರದ್ದುಪಡಿಸಿದೆ . ಹಾಗಾಗಿ ಮುಸ್ಲಿಂ ಸಮುದಾಯ ಬಿಜೆಪಿಯೊಂದಿಗೆ ಕೈಜೋಡಿಸಬೇಕು . ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು . ಈ ಸಂದರ್ಭದಲ್ಲಿ ಗ್ರಾಮದ ಅಭಯಾಂಜನೇಯಸ್ವಾಮಿ ಆಲಯದ ಆವರಣದಲ್ಲಿ ಗ್ರಾಮಸ್ಥರ ವತಿಯಿಂದ ಏರ್ಪಡಿಸಲಾಗಿದ್ದ ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಭಾಗವಹಿಸಿದ್ದರು . ಸಮಾರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಮಂಜೂರಾತಿ ದಾಖಲೆಗಳನ್ನು ವಿತರಿಸಲಾಯಿತು . ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್.ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ರೆಡ್ಡಿ , ಮುಖಂಡ ರಾದ ಜಯರಾಮರೆಡ್ಡಿ , ರೆಡ್ಡಪ್ಪ , ನಾರಾಯಣ ಸ್ವಾಮಿ , ನಾರಾಯಣಗೌಡ , ಶಫಿವುಲ್ಲಾ , ಫೈರೋಜ್ , ರಮೇಶ್ , ನಾರಾಯಣಸ್ವಾಮಿ , ಕೃಷ್ಣಪ್ಪ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು