8:02 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ

11/08/2021, 08:24

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದರು. 

ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು . 

ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , 2ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ. ಭಗವಂತ್ ಕೂಬಾ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು