11:10 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ

11/08/2021, 08:24

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದರು. 

ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು . 

ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , 2ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ. ಭಗವಂತ್ ಕೂಬಾ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು