2:47 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು