9:12 AM Monday3 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು