8:49 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು