9:51 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು