8:53 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು