5:35 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಇನ್ನು 3 ದಿನ ಕಠಿಣ ಲಾಕ್ ಡೌನ್ ನಿಯಮ ಜಾರಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

20/05/2021, 17:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರ ಜಿಲ್ಲೆಯಲ್ಲಿ ನಾಳೆ, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು  ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ತಿಳಿಸಿದ್ದಾರೆ.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆಳಗ್ಗೆ 6.00 ರಿಂದ ಸಂಜೆ 6.00ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ಹೇಳಿದರು.

ಅಂಗಡಿಗಳಲ್ಲಿ ದಿನಸಿ, ತರಕಾರಿ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಮಾರಾಟಕ್ಕೆ ಈಗ ಬೆಳಿಗ್ಗೆ 6.00 ರೊಂದ 10.00ರವರೆಗೆ ಅವಕಾಶವಿತ್ತು. ಅದನ್ನು ಇನ್ನು ಮೂರು ದಿನಗಳ ಕಾಲ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಳೆ ಸಂಜೆವರೆಗೂ ತಮಗೆ ಅಗತ್ಯವಿರುವ ವಸ್ತುಗಳ ಖರೀದಿಯನ್ನು ಮಾಡಿ ಇಟ್ಟುಕೊಳ್ಳುವಂತೆ ಜಿಲ್ಲೆಯ ಜನತೆಗೆ ಜಿಲ್ಲಧಿಕಾರಿಗಳು ಕೋರಿದರು.

ಹೋಟೆಲ್ ನಿಂದ ಆಹಾರ ಪರ್ಸೆಲ್ ತರುವುದು ಈಗ ಜಾರಿಯಿರುವಂತೆ ಮುಂದುವರೆಯಲಿದೆ ಎಂದ ಅವರು, ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಸಂಜೆ 6.00 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಬ್ಯಾಂಕಿಂಗ್ ಕಚೇರಿಗಳೂ ಈ ಮೂರು ದಿನ ಮುಚ್ಚಿರುತ್ತವೆ. ಆದರೆ, ಎಟಿಎಂ ವ್ಯವಸ್ಥೆ ಲಭ್ಯವಿರಲಿದೆ. ಸರ್ಕಾರಿ ಕಚೇರಿಗಳು ಈಗಾಗಲೇ ಜಾರಿಯಿರುವ ನಿಯಮದಂತೆ ಕಾರ್ಯ ಮುಂದುವರೆಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ ಎಂದ ಅವರು ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು  ಅಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು