4:23 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಇನ್ನು 3 ದಿನ ಕಠಿಣ ಲಾಕ್ ಡೌನ್ ನಿಯಮ ಜಾರಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

20/05/2021, 17:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರ ಜಿಲ್ಲೆಯಲ್ಲಿ ನಾಳೆ, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು  ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ತಿಳಿಸಿದ್ದಾರೆ.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆಳಗ್ಗೆ 6.00 ರಿಂದ ಸಂಜೆ 6.00ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ಹೇಳಿದರು.

ಅಂಗಡಿಗಳಲ್ಲಿ ದಿನಸಿ, ತರಕಾರಿ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಮಾರಾಟಕ್ಕೆ ಈಗ ಬೆಳಿಗ್ಗೆ 6.00 ರೊಂದ 10.00ರವರೆಗೆ ಅವಕಾಶವಿತ್ತು. ಅದನ್ನು ಇನ್ನು ಮೂರು ದಿನಗಳ ಕಾಲ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಳೆ ಸಂಜೆವರೆಗೂ ತಮಗೆ ಅಗತ್ಯವಿರುವ ವಸ್ತುಗಳ ಖರೀದಿಯನ್ನು ಮಾಡಿ ಇಟ್ಟುಕೊಳ್ಳುವಂತೆ ಜಿಲ್ಲೆಯ ಜನತೆಗೆ ಜಿಲ್ಲಧಿಕಾರಿಗಳು ಕೋರಿದರು.

ಹೋಟೆಲ್ ನಿಂದ ಆಹಾರ ಪರ್ಸೆಲ್ ತರುವುದು ಈಗ ಜಾರಿಯಿರುವಂತೆ ಮುಂದುವರೆಯಲಿದೆ ಎಂದ ಅವರು, ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಸಂಜೆ 6.00 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಬ್ಯಾಂಕಿಂಗ್ ಕಚೇರಿಗಳೂ ಈ ಮೂರು ದಿನ ಮುಚ್ಚಿರುತ್ತವೆ. ಆದರೆ, ಎಟಿಎಂ ವ್ಯವಸ್ಥೆ ಲಭ್ಯವಿರಲಿದೆ. ಸರ್ಕಾರಿ ಕಚೇರಿಗಳು ಈಗಾಗಲೇ ಜಾರಿಯಿರುವ ನಿಯಮದಂತೆ ಕಾರ್ಯ ಮುಂದುವರೆಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ ಎಂದ ಅವರು ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು  ಅಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು