9:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಮಟ್ಕಾ, ಬೆಟ್ಟಿಂಗ್, ಅಕ್ರಮ ಬಡ್ಡಿ ವ್ಯವಹಾರ, ಜೂಜಾಟ ಬಂದ್: ನೂತನ ಎಸ್ಪಿ ಡಿ.ದೇವರಾಜ್ 

11/01/2022, 21:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂಧೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಗಳು ಬಗೆಹರಿಯದಿದ್ದರೆ, ತಾವುಗಳು ಧೈರ್ಯವಾಗಿ ನಮ್ಮ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

 ಜೂಜಿಗೆ ದಾಸರಾಗಿ ನಿಮ್ಮ ಮಕ್ಕಳ ವಿದ್ಯಾಭಾಸ್ಯಕ್ಕೆ ದಕ್ಕೆ ಉಂಟು ಮಾಡಬೇಡಿ. ಯಾವುದೇ ರೀತಿಯ ಪ್ರತಿಭಟನೆಗಳು , ಸಂಘಟನೆ ಮಾಡುವುದಾದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಪೊಲೀಸ್ ಅನುಮತಿಯನ್ನು ಪಡೆಯಬೇಕು . ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು . ಸಾಮಾಜಿಕ ಜಾಲತಾಣಗಳ ದುರ್ಬಳಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು . ವಾಟ್ಸ್ ಆಫ್ ಗುಂಪಿನಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ಮಾನಹಾನಿ ಪೋಸ್ಟ್ ಮಾಡಿದರೆ ಗುಂಪಿನ ಆಡ್ಮಿನ್‌ಗಳನ್ನು ಹೊಣೆ ಮಾಡಲಾಗುತ್ತದೆ ಎಂದು ತಿಳಿಸಿದರು. 

ವಾಹನಗಳ ಮೇಲೆ ಯಾವುದೇ ಸಂಘಟನೆಯ ಹೆಸರು ಮುಂತಾದವುಗಳನ್ನು ಆರ್.ಟಿ.ಓ ನಿಂದ ಅನುಮತಿ ಇಲ್ಲದೆ ಬಳಸಿಕೊಳ್ಳುವಂತಿಲ್ಲ. ಇದು ಕಾನೂನು ಬಾಹಿರ. ಗ್ರಾಮೀಣ ಪ್ರದೇಶಗಳ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಕುರಿತು ಅಬಕಾರಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಅಕ್ರಮ ಮದ್ಯ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿ ಮಧ್ಯವನ್ನು ವಶಪಡಿಸಿಕೊಂಡು ಲೇಬಲ್ ಸಂಖ್ಯೆ ಆಧಾರದ ಮೇಲೆ ಸಂಬಂಧ ಪಟ್ಟ ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂದೆಯನ್ನು ನಿಲ್ಲಿಸಲಾಗುವುದು. ಜಿಲ್ಲೆಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಿಗೆ ಬಿಳಿ ಬಣ್ಣ ಹೊಡಿಸಲಾಗುವುದು. ಬಡ್ಡಿ ವ್ಯವಹಾರ ನಡೆಸುವವರು ಪರವಾನಿಗಿ ಹೊಂದಿದ್ದರೂ ಪರಿಶೀಲನೆ ನಡೆಸಿ ಅಕ್ರಮ ಬಡ್ಡಿ ವ್ಯವಹಾರವನ್ನು ತಡೆಯಲಾಗುತ್ತದೆ ಎಂದು ತಿಳಿಸಿದರು. 

ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗೆ ಸರಿಯಾಗಿ ಪೊಲೀಸ್ ಅಧಿಕಾರಿಗಳು ಸ್ಪಂದಿಸದಿದ್ದರೆ ನನ್ನ ದೂರವಾಣಿ ಸಂಖ್ಯೆ 9480802601 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಚಿನ್ ಘೋರ್ಪಡೆ ಅವರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು