2:54 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಮಟ್ಕಾ, ಬೆಟ್ಟಿಂಗ್, ಅಕ್ರಮ ಬಡ್ಡಿ ವ್ಯವಹಾರ, ಜೂಜಾಟ ಬಂದ್: ನೂತನ ಎಸ್ಪಿ ಡಿ.ದೇವರಾಜ್ 

11/01/2022, 21:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂಧೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಗಳು ಬಗೆಹರಿಯದಿದ್ದರೆ, ತಾವುಗಳು ಧೈರ್ಯವಾಗಿ ನಮ್ಮ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

 ಜೂಜಿಗೆ ದಾಸರಾಗಿ ನಿಮ್ಮ ಮಕ್ಕಳ ವಿದ್ಯಾಭಾಸ್ಯಕ್ಕೆ ದಕ್ಕೆ ಉಂಟು ಮಾಡಬೇಡಿ. ಯಾವುದೇ ರೀತಿಯ ಪ್ರತಿಭಟನೆಗಳು , ಸಂಘಟನೆ ಮಾಡುವುದಾದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಪೊಲೀಸ್ ಅನುಮತಿಯನ್ನು ಪಡೆಯಬೇಕು . ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು . ಸಾಮಾಜಿಕ ಜಾಲತಾಣಗಳ ದುರ್ಬಳಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು . ವಾಟ್ಸ್ ಆಫ್ ಗುಂಪಿನಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ಮಾನಹಾನಿ ಪೋಸ್ಟ್ ಮಾಡಿದರೆ ಗುಂಪಿನ ಆಡ್ಮಿನ್‌ಗಳನ್ನು ಹೊಣೆ ಮಾಡಲಾಗುತ್ತದೆ ಎಂದು ತಿಳಿಸಿದರು. 

ವಾಹನಗಳ ಮೇಲೆ ಯಾವುದೇ ಸಂಘಟನೆಯ ಹೆಸರು ಮುಂತಾದವುಗಳನ್ನು ಆರ್.ಟಿ.ಓ ನಿಂದ ಅನುಮತಿ ಇಲ್ಲದೆ ಬಳಸಿಕೊಳ್ಳುವಂತಿಲ್ಲ. ಇದು ಕಾನೂನು ಬಾಹಿರ. ಗ್ರಾಮೀಣ ಪ್ರದೇಶಗಳ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಕುರಿತು ಅಬಕಾರಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಅಕ್ರಮ ಮದ್ಯ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿ ಮಧ್ಯವನ್ನು ವಶಪಡಿಸಿಕೊಂಡು ಲೇಬಲ್ ಸಂಖ್ಯೆ ಆಧಾರದ ಮೇಲೆ ಸಂಬಂಧ ಪಟ್ಟ ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂದೆಯನ್ನು ನಿಲ್ಲಿಸಲಾಗುವುದು. ಜಿಲ್ಲೆಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಿಗೆ ಬಿಳಿ ಬಣ್ಣ ಹೊಡಿಸಲಾಗುವುದು. ಬಡ್ಡಿ ವ್ಯವಹಾರ ನಡೆಸುವವರು ಪರವಾನಿಗಿ ಹೊಂದಿದ್ದರೂ ಪರಿಶೀಲನೆ ನಡೆಸಿ ಅಕ್ರಮ ಬಡ್ಡಿ ವ್ಯವಹಾರವನ್ನು ತಡೆಯಲಾಗುತ್ತದೆ ಎಂದು ತಿಳಿಸಿದರು. 

ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗೆ ಸರಿಯಾಗಿ ಪೊಲೀಸ್ ಅಧಿಕಾರಿಗಳು ಸ್ಪಂದಿಸದಿದ್ದರೆ ನನ್ನ ದೂರವಾಣಿ ಸಂಖ್ಯೆ 9480802601 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಚಿನ್ ಘೋರ್ಪಡೆ ಅವರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು