2:00 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು