11:57 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು