1:47 AM Friday22 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು