9:44 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕೋಲಾರ ಪತ್ರಿಕೆ ಸಂಪಾದಕ ಪ್ರಹ್ಲಾದ ರಾವ್ ಗೆ ಪತ್ರಕರ್ತರ ಸಂಘದಿಂದ ಭಾವಪೂರ್ಣ ನುಡಿನಮನ

10/10/2023, 14:52

ಕೋಲಾರ(reporterkarnata.com): ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದ ರಾವ್ ಅವರಿಗೆ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು, ರಾಯರ ಭಾವಚಿತ್ರಕ್ಕೆ ಪುಷ್ಪ‌ನಮನ ಅರ್ಪಿಸಿ, ನುಡಿನಮನ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ‘ಕೋಲಾರ ಪತ್ರಿಕೆಯ ನಂಬರ್ ಒನ್ ಸ್ಥಾನವನ್ನು ಕಸಿಯಲು ಯಾರಿಂದಲೂ ಸಾಧ್ಯವಾಗಿಲ್ಲ. ಕೋಲಾರ ಪತ್ರಿಕೋದ್ಯಮದ ದಂತಕತೆ ರಾಯರು. ಅವರ ಸಾಹಸ ಹಾಗೂ ಧೈರ್ಯ ಮೆಚ್ಚುವಂಥದ್ದು. ಸೇವೆ ಎಂದೇ ಭಾವಿಸಿದ್ದರು. ಆದರೆ, ಈಗಿನ ಪತ್ರಿಕೋದ್ಯಮದಲ್ಲಿ ಹೊಟ್ಟೆಪಾಡು ದೊಡ್ಡದಾಗಿದೆ’ ಎಂದರು.
‘ಶಿಸ್ತಿನ ಜೀವನ ನಡೆಸಿದರು. ಯಾರ ವಿರೋಧ ಕಟ್ಟಿಕೊಂಡವರಲ್ಲ. ಕೋಲಾರ ಪತ್ರಿಕೆಯ ನಿರಂತರತೆ ಅದ್ಭುತ. ಒಂದೂ ದಿನ ನಿಲ್ಲಲಿಲ್ಲ. ಸಾಹಿತ್ಯಕವಾಗಿ ಹಾಗೂ ಸಾಮಾಜಿಕವಾಗಿ ವೇದಿಕೆ ಸೃಷ್ಟಿ ಮಾಡಿ ಸಾಹಿತಿಗಳನ್ನು ಕೋಲಾರ‌ ಪತ್ರಿಕೆ ಬೆಳೆಸಿದೆ’ ಎಂದು ಹೇಳಿದರು.
‘ಕೋಲಾರ ಪತ್ರಿಕೋದ್ಯಮಕ್ಕೆ ಹಾದಿ ತೋರಿದವರು ಪ್ರಹ್ಲಾದ ರಾವ್, ಪತ್ರಿಕೋದ್ಯಮದಲ್ಲಿ ಚಾಪು ಮೂಡಿಸಿದರು. ಆ ಪತ್ರಿಕೆ ಆತ್ಮ, ಉಸಿರು ಆಗಿತ್ತು. ಆ ಪತ್ರಿಕೆ ಮುಂದುವರಿದರೆ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ’ ಎಂದರು.
ಯಾಜಮಾನಿಕೆ‌ ಸಂಸ್ಕೃತಿ ಹೋಗಿ ಹಿರಿಯರ ಹಾಕಿಕೊಟ್ಟ ದಾರಿಯಲ್ಲಿ ನಿಸ್ವಾರ್ಥದಿಂದ ನಡೆಯಬೇಕು ಎಂದು ಸಲಹೆ‌ ನೀಡಿದರು.
ಹಿರಿಯ ಪತ್ರಕರ್ತ ಎಂ.ಜಿ. ಪ್ರಭಾಕರ ಮಾತನಾಡಿ, ‘ಪ್ರಹ್ಲಾದರಾವ್ ತಾವು ನಂಬಿದ ಸಿದ್ಧಾಂತದಂತೆ ನಡೆದರು. ಸಂಕಷ್ಟದ ಸಮಯದಲ್ಲಿ ಪತ್ರಿಕೆ ಹೊರತಂದರು‌. ಅವರ ಮಾರ್ಗದಲ್ಲಿ ಕುಗ್ಗದೆ, ಬೀಗದೆ, ಹೆದರದೆ ಪತ್ರಕರ್ತರು ಹೆಜ್ಜೆ ಇಡಬೇಕು’ ಎಂದರು.
ಹಿರಿಯ ಪತ್ರಕರ್ತ ಬಿ. ಸುರೇಶ್ ಮಾತನಾಡಿ, ಸ್ಥಳೀಯ ಪತ್ರಿಕೆಯನ್ನು ಬೆಳೆಸಿದ ಕೀರ್ತಿ ಪ್ರಹ್ಲಾದರಾವ್ ಅವರದ್ದು. ಉಚಿತವಾಗಿ ಪತ್ರಿಕೆ ನೀಡಿದರೆ ಮೌಲ್ಯ ಇರಲ್ಲ ಎಂಬುದು ಅವರ ನಂಬಿಕೆ ಆಗಿತ್ತು’ ಎಂದರು.
ಪತ್ರಕರ್ತ ಶ್ರೀನಿವಾಸಮೂರ್ತಿ ಮಾತನಾಡಿ, ಹಲವರಿಗೆ ಬರವಣಿಗೆ ಕಲಿಸಿ ಬದುಕು ಕಟ್ಟಿಕೊಟ್ಟರು. ತಮಗಿಂತ ಉಳಿದವರು ಚೆನ್ನಾಗಿ ಬರೆಯಬೇಕು, ಬೆಳೆಯಬೇಕು ಎಂಬ ಇಂಗಿತ ಹೊಂದಿದ್ದರು. ವ್ಯವಾಹರಿಕವಾಗಿ ಕಠಿಣವಾಗಿದ್ದರು‌. ಅವರ ಶಿಷ್ಯರ ಬಳಗ ಬಹಳಷ್ಟಿದೆ’ ಎಂದು ಹೇಳಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು ಮಾತನಾಡಿ, ‘ಜನಸಂಪರ್ಕ ಹೊಂದಿದ್ದರು. ಎಲ್ಲಾ ವರ್ಗದ ಪ್ರೀತಿ ಪಾತ್ರರಾಗಿದ್ದರು‌. ಅಪಾರ ಸ್ನೇಹವರ್ಗ ಹೊಂದಿದ್ದರು. ಶಿಸ್ತಿನ ಜೀವನ ಸಾಗಿಸಿದರು. ಸರಳ‌ಸಜ್ಜನಿಕೆಯ ವ್ಯಕ್ತಿ’ ಎಂದು ಬಣ್ಣಿಸಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್ ಮಾತನಾಡಿ, ‘ರಾಯರಿಗಿಂತ ಮೊದಲು ನನಗೆ ಅವರ ಪತ್ರಿಕೆ ಪರಿಚಯವಾಗಿತ್ತು. ಆಗ ನಾನು ಕವನ ಬರೆಯುತ್ತಿದ್ದೆ. ಈಗಲೂ ಆ ಲೇಖನಗಳನ್ನು ಜತನದಿಂದ ಕಾಪಾಡಿಕೊಂಡು ಬಂದಿದ್ದೇನೆ. ತಮ್ಮದೇ‌ ಅದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿದರು. ಅವರಂತೆ ಮತ್ತೊಂದು ಸ್ಥಳೀಯ ಪತ್ರಿಕೆಯನ್ನು ಯಾರೂ ರೂಪಿಸಿಲ್ಲ ಎಂಬುದು ನನ್ನ ಅಭಿಪ್ರಾಯ’ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಮಾತನಾಡಿ, ‘ರಾಯರು ರಾತ್ರಿ 12ರವರಗೆ ಕೆಲಸ ಮಾಡಿದ್ದರೂ ಬೆಳಿಗ್ಗೆ ಬೇಗನೇ ಹೇಳುತ್ತಿದ್ದರು. ತಮ್ಮ ಪತ್ರಿಕೆಯಲ್ಲಿ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದರು. ರಾಜ್ಯ,‌ ದೇಶದ ಸುದ್ದಿಗಳಿಗೆ ರಾಜ್ಯ ಪತ್ರಿಕೆಗಳು ಇವೆ ಎಂಬುದಾಗಿ ಹೇಳುತ್ತಿದ್ದರು ಎಂದರು.
ಸಭೆಯಲ್ಲಿ ಹಿರಿಯ ಪತ್ರಕರ್ತರಾದ ಎಸ್.ಸಚ್ಚಿದಾನಂದ, ಮಾಮಿ ಪ್ರಕಾಶ್, ಪಾ.ಶ್ರೀ.ಅನಂತರಾಮ್, ಸಿ.ವಿ.ನಾಗರಾಜ್, ಎಂ.ಡಿ.ಚಾಂದ್ ಪಾಷ, ಓಂಕಾರಮೂರ್ತಿ, ವಿ. ಈಶ್ಚರ್, ಎಸ್.ರವಿಕುಮಾರ್, ಮದನ್, ಆಸೀಫ್ ಪಾಷ, ಸರ್ವಜ್ಞ ಮೂರ್ತಿ, ಸುದರ್ಶನ್, ತಬ್ರೇಜ್, ಮುಕ್ತಿಯಾರ್, ಸಮೀರ್ ಅಹ್ಮದ್, ಬೆಟ್ಟಣ್ಣ, ಗಂಗಾಧರ್, ಗೋಪಿ, ಸಿ.ಅಮರೇಶ, ಮುಳಬಾಗಿಲು ಅಪ್ಪಾಜಿಗೌಡ, ಶ್ರೀನಿವಾಸಪುರದ ಲಕ್ಷ್ಮಣ್, ನಾರಾಯಣಮೂರ್ತಿ, ಮಾಲೂರಿನ ನಾರಾಯಣಸ್ವಾಮಿ, ವೆಂಕಟೇಶ್, ಪುರುಷೋತ್ತಮ್, ವಿನೋದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು