2:23 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು