3:53 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು