4:26 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು