2:58 PM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಸಂಭ್ರಮ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

15/08/2024, 21:06

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ನಗರಾಧಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಸಂದೇಶ ನೀಡಿದರು.


ಸರ್ಕಾರ ಜನರಿಗೆ ನೀಡಿದ ಭರವಸೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಕೋಲಾರ ಜಿಲ್ಲೆಗೆ ಭರಪೂರ ಅನುದಾನ ಒದಗಿಸಲು ಶ್ರಮ ವಹಿಸಲಾಗಿದೆ. ಒಳಚರಂಡಿ ಜಾಲ, ಗೃಹ ಸಂಪರ್ಕಕ್ಕಾಗಿ ಕೋಲಾರ ನಗರಕ್ಕೆ 60 ಕೋಟಿಗಳ ಅನುದಾನ, ರಾಬರ್ಟ್ ಸನ್ ಪೇಟೆ ಅಭಿವೃದ್ಧಿಗೆ 20 ಕೋಟಿ ಅನುದಾನ ಅನುಮೋದನೆ ಮಾಡಲಾಗಿದೆ. ವೇಮಗಲ್ ಕುರಗಲ್ ನಲ್ಲಿ ವಿವಿಧ ಯೋಜನೆಗಳಿಗಾಗಿ 3.50 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೊಚ್ಚು ಸಂಸ್ಕಾರಣಾ ಘಟಕ ನಿರ್ಮಾಣಕ್ಕಾಗಿ 25.11 ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಮೃತ್ 2.0 ಯೋಜನೆಯಡಿಯಲ್ಲಿ ನೀರು ಸರಬರಾಜು ಮತ್ತು ಹಸಿರು ವಲಯ ಹಾಗೂ ಪಾರ್ಕ್ ಗಳಿಗಾಗಿ ಜಿಲ್ಲೆಗೆ 40 ಕೋಟಿ ಅನುದಾನ ನೀಡಲಾಗಿದೆ. ಯಾರಗೊಳ್ ಆಣೆಕಟ್ಟಿನಿಂದ ಬಂಗಾರಪೇಟೆ, ಕೋಲಾರ ಹಾಗೂ ಮಾಲೂರು ತಾಲ್ಲೂಕುಗಳ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದಕ್ಕಾಗಿ 308.46 ಕೋಟಿ ವೆಚ್ಚ ಮಾಡಲಾಗಿದೆ. ಎಂದರು.
ಕೋಲಾರ ನಗರದ ಹೊರವಲಯದಲ್ಲಿ ಹೊರವರ್ತುಲ ರಸ್ತೆ ಅಭಿವೃದ್ಧಿಗೆ 100 ಕೋಟಿ ಅನುದಾನ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಹಳೇ ಬಸ್ ನಿಲ್ದಾನವನ್ನು ನವೀಕರಣ ಮಾಡಲು 5 ಕೋಟಿಗಳ ಅನುದಾನ ಮಂಜೂರು ಮಾಡಲಾಗಿದೆ. ಬಂಗಾರಪೇಟ್, ಕೋಲಾರ ನಗರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಕೋಲಾರ ಚಿಕ್ಕಬಳ್ಳಾಪುರ ರಸ್ತೆ ಪಾದಚಾರಿ ಮಾರ್ಗ ಅಭಿವೃದ್ಧಿಗೆ 12 ಕೋಟಿ ಅನುದಾನ ಒದಗಿಸಲಾಗುವುದು. ಇಂತಹ ವಿಶೇಷ ಅನುದಾನಗಳನ್ನು ಜಿಲ್ಲೆಗೆ ಒದಗಿಸಲಾಗಿದೆ ಎಂದು ಅವರು‌ ನುಡಿದರು.
ಜಿಲ್ಲೆಯಲ್ಲಿ ಇಲಾಖೆವಾರು ಪ್ರಗತಿಯ ವಿವರಗಳನ್ನು ತೆರೆದಿಟ್ಟರು.
ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಂದು ವರ್ಷದ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನಾ ಕೈಪಿಡಿ ಬಿಡುಗಡೆ ಮಾಡಲಾಯಿತು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣ ನವೀಕರಣ, ಕಾಮಗಾರಿ ಉದ್ಘಾಟನೆ,ತೋಟಗಾರಿಕೆ ಇಲಾಖೆಯ 2000 ಮೇ. ಟನ್ ಸಾಮರ್ಥ್ಯದ ಶೀತಲ ಗೃಹ ಶಂಕುಸ್ಥಾಪನೆ, ನಿರ್ಮಿತಿ ಕೇಂದ್ರದ ಶಾಲಾ ಕಟ್ಟಡ, ಕೋದಂಡ ರಾಮಸ್ವಾಮಿ ದೇವಸ್ಥಾನ, ಸಾರ್ವಜನಿಕ ಸಂಪರ್ಕ ಕೇಂದ್ರ, ಕಂದಾಯ ನ್ಯಾಯಾಲಯ ಕಟ್ಟಡ, ಅಂಬೇಡ್ಕರ್ ಭವನ, ಅಟಲ್ ಜಿ ಜನಸ್ನೇಹಿ ಕೇಂದ್ರ ಕಟ್ಟಡ, ಕಂದಾಯ ಇಲಾಖೆಯ 2 ಹೊಸ ನಾಡ ಕಚೇರಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಕೋಲಾರ ಜಿಲ್ಲಾ ಶಾಸಕ ಡಾ. ಕೊತ್ತೂರ್ ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಇಂಚರ ಗೋವಿಂದರಾಜು, ಎಂ. ಎಲ್. ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು