6:16 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಸಂಭ್ರಮ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

15/08/2024, 21:06

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ನಗರಾಧಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಸಂದೇಶ ನೀಡಿದರು.


ಸರ್ಕಾರ ಜನರಿಗೆ ನೀಡಿದ ಭರವಸೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಕೋಲಾರ ಜಿಲ್ಲೆಗೆ ಭರಪೂರ ಅನುದಾನ ಒದಗಿಸಲು ಶ್ರಮ ವಹಿಸಲಾಗಿದೆ. ಒಳಚರಂಡಿ ಜಾಲ, ಗೃಹ ಸಂಪರ್ಕಕ್ಕಾಗಿ ಕೋಲಾರ ನಗರಕ್ಕೆ 60 ಕೋಟಿಗಳ ಅನುದಾನ, ರಾಬರ್ಟ್ ಸನ್ ಪೇಟೆ ಅಭಿವೃದ್ಧಿಗೆ 20 ಕೋಟಿ ಅನುದಾನ ಅನುಮೋದನೆ ಮಾಡಲಾಗಿದೆ. ವೇಮಗಲ್ ಕುರಗಲ್ ನಲ್ಲಿ ವಿವಿಧ ಯೋಜನೆಗಳಿಗಾಗಿ 3.50 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೊಚ್ಚು ಸಂಸ್ಕಾರಣಾ ಘಟಕ ನಿರ್ಮಾಣಕ್ಕಾಗಿ 25.11 ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಮೃತ್ 2.0 ಯೋಜನೆಯಡಿಯಲ್ಲಿ ನೀರು ಸರಬರಾಜು ಮತ್ತು ಹಸಿರು ವಲಯ ಹಾಗೂ ಪಾರ್ಕ್ ಗಳಿಗಾಗಿ ಜಿಲ್ಲೆಗೆ 40 ಕೋಟಿ ಅನುದಾನ ನೀಡಲಾಗಿದೆ. ಯಾರಗೊಳ್ ಆಣೆಕಟ್ಟಿನಿಂದ ಬಂಗಾರಪೇಟೆ, ಕೋಲಾರ ಹಾಗೂ ಮಾಲೂರು ತಾಲ್ಲೂಕುಗಳ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದಕ್ಕಾಗಿ 308.46 ಕೋಟಿ ವೆಚ್ಚ ಮಾಡಲಾಗಿದೆ. ಎಂದರು.
ಕೋಲಾರ ನಗರದ ಹೊರವಲಯದಲ್ಲಿ ಹೊರವರ್ತುಲ ರಸ್ತೆ ಅಭಿವೃದ್ಧಿಗೆ 100 ಕೋಟಿ ಅನುದಾನ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಹಳೇ ಬಸ್ ನಿಲ್ದಾನವನ್ನು ನವೀಕರಣ ಮಾಡಲು 5 ಕೋಟಿಗಳ ಅನುದಾನ ಮಂಜೂರು ಮಾಡಲಾಗಿದೆ. ಬಂಗಾರಪೇಟ್, ಕೋಲಾರ ನಗರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಕೋಲಾರ ಚಿಕ್ಕಬಳ್ಳಾಪುರ ರಸ್ತೆ ಪಾದಚಾರಿ ಮಾರ್ಗ ಅಭಿವೃದ್ಧಿಗೆ 12 ಕೋಟಿ ಅನುದಾನ ಒದಗಿಸಲಾಗುವುದು. ಇಂತಹ ವಿಶೇಷ ಅನುದಾನಗಳನ್ನು ಜಿಲ್ಲೆಗೆ ಒದಗಿಸಲಾಗಿದೆ ಎಂದು ಅವರು‌ ನುಡಿದರು.
ಜಿಲ್ಲೆಯಲ್ಲಿ ಇಲಾಖೆವಾರು ಪ್ರಗತಿಯ ವಿವರಗಳನ್ನು ತೆರೆದಿಟ್ಟರು.
ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಂದು ವರ್ಷದ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನಾ ಕೈಪಿಡಿ ಬಿಡುಗಡೆ ಮಾಡಲಾಯಿತು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣ ನವೀಕರಣ, ಕಾಮಗಾರಿ ಉದ್ಘಾಟನೆ,ತೋಟಗಾರಿಕೆ ಇಲಾಖೆಯ 2000 ಮೇ. ಟನ್ ಸಾಮರ್ಥ್ಯದ ಶೀತಲ ಗೃಹ ಶಂಕುಸ್ಥಾಪನೆ, ನಿರ್ಮಿತಿ ಕೇಂದ್ರದ ಶಾಲಾ ಕಟ್ಟಡ, ಕೋದಂಡ ರಾಮಸ್ವಾಮಿ ದೇವಸ್ಥಾನ, ಸಾರ್ವಜನಿಕ ಸಂಪರ್ಕ ಕೇಂದ್ರ, ಕಂದಾಯ ನ್ಯಾಯಾಲಯ ಕಟ್ಟಡ, ಅಂಬೇಡ್ಕರ್ ಭವನ, ಅಟಲ್ ಜಿ ಜನಸ್ನೇಹಿ ಕೇಂದ್ರ ಕಟ್ಟಡ, ಕಂದಾಯ ಇಲಾಖೆಯ 2 ಹೊಸ ನಾಡ ಕಚೇರಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಕೋಲಾರ ಜಿಲ್ಲಾ ಶಾಸಕ ಡಾ. ಕೊತ್ತೂರ್ ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಇಂಚರ ಗೋವಿಂದರಾಜು, ಎಂ. ಎಲ್. ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು