3:30 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೋಲಾರ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿ: ಆಹಾರದಿಂದ ಔಷಧಿವರೆಗೂ ಬೇಕು ಬ್ರೋಕರ್ ಗಳು!

08/02/2022, 09:25

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿನ ದಲ್ಲಾಳಿಗಳಿಗೆ ಹಾವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸುವಂತೆ ರೈತ ಸಂಘದಿಂದ ಶಸ್ತ್ರಚಿಕಿತ್ಸಕಾರಿಗಳಾದ ಡಾ . ರಘುನಾಥ್‌ ರೆಡ್ಡಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. 

ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರದವರೆಗೆ ಆಹಾರದಿಂದ ಔಷಧಿಗಳವರೆಗೂ ಬಡವರು ಪಡೆಯಬೇಕಾದರೆ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ನೆರಳು ಇಲ್ಲದೆ ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲವೆಂದು ಅವ್ಯವಸ್ಥೆ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು . ಮನವಿ ನೀಡಿ ಮಾತನಾಡಿದವರು ೧೦೦ ಹಾಸಿಗೆಗಳ ಆಸ್ಪತ್ರೆ ಬಡ ಹೆಣ್ಣು ಮಕ್ಕಳ ಪಾಲಿಗೆ ಇದ್ದು ಇಲ್ಲದಂತಾಗಿದೆ . ಹೆರಿಗೆಗೆ ಬರುವ ಬಡವರಿಗೆ ನೂರೊಂದು ನೆಪ ಹೇಳಿ ಖಾಸಗಿ ಆಸ್ಪತ್ರೆಗಳ ರವಾನೆ ಮಾಡುವ ದಂದೆ ಜೊತೆಗೆ ಹೆರಿಗೆ ವಿಭಾಗದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಜೊತೆಗೆ ಮಕ್ಕಳ ವಾರ್ಡ್‌ಗಳಲ್ಲಿ ಸ್ಟೀನ್‌ಗಳಿಲ್ಲದೆ ಮಕ್ಕಳಿಗೆ ಹಾಲುಣಿಸಲು ಕಷ್ಟವಾಗುತ್ತದೆಂದು ವಿವರಿಸಿದರು . ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌ ಮಾತನಾಡಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಅನಧೀಕೃತ ಅಂಗಡಿ ಮಳಿಗೆಗಳ ಹೆಚ್ಚಾಗಿ ಹೆಚ್ಚಿನ ಬೆಲೆಗೆ ಮಾರಾಟಮಾಡುವ ಟೆಂಡರ್ ಇಲ್ಲದ ಅಮಗಡಿಗಳನ್ನು ತೆರೆವುಗೊಳಿಸಬೇಕೆಂದು ಒತ್ತಾಯ ಜೊತೆಗೆ ಮಾಡಿದರು.

ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ೧೨ ಜನರ ೫ ತಿಂಗಳ ವೇತನ ಜೊತೆಗೆ ಪಿ.ಎಪ್ ಇ , ಎಸ್ , ಐ ನೀಡದೇ ಯಾವುದೇ ಮೂಲ ಭೂತ ಸೌಕರ್ಯಗಳನ್ನು ಒದಗಿಸದೆ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಮತ್ತು ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದರು . ಮನವಿ ಸ್ವೀಕರಿಸಿದ ಮಾತನಾಡಿದ ಡಾ . ರಘುನಾಥ್‌ರೆಡ್ಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ದಲ್ಲಾಳಿಗಳ ಹವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿ ಮಳಿಗೆ ತೆರೆವುಗೊಳಿಸಿ , ಬಡ ಕಾರ್ಮಿಕರಿಗೆ ವೇತನ ಕೊಡುವ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು . ಮನವಿ ನೀಡುವಾಗ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಜಿಲ್ಲಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್ , ಐತಾಂಡಹಳ್ಳಿ ಮುನ್ನಾ , ವಕ್ಕಲೇರಿ ಹನುಮಯ್ಯ , ಯಲ್ಲಪ್ಪ , ಯಾರಂಗಟ್ಟ ಗೀರೀಶ್ , ಕುವಣ್ಣ , ಸುರೇಶ್‌ಬಾಬು , ಮಂಜುನಾಥ್ , ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು