3:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೋಲಾರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕ ಉದ್ಘಾಟನೆ

19/12/2022, 21:27

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka.@gmail.com

ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕದ ಯೂನಿಟ್ ದರ 2.5 ಲಕ್ಷ ಘಟಕವನ್ನು ಒಕ್ಕೂಟದಿಂದ ಶೇ .100 % ರಿಯಾಯತಿ ದರದಲ್ಲಿ ಸಂಘಗಳಿಗೆ ಸರಬರಾಜು ಮಾಡಿಸಿ , ಮಿಲ್ಕಿಂಗ್ ಕಟ್ಟಡ ನಿರ್ಮಾಣಕ್ಕಾಗಿ 50,000 / – ರೂಗಳ ಸಹಾಯಧನವನ್ನು ನೀಡಿರುತ್ತಾರೆ . ಇದರ ಜೊತೆಗೆ ಒಕ್ಕೂಟದಿಂದ ಪ್ರತಿ ಲೀಟರ್‌ಗೆ 0.30 ಪೈಸೆಯಂತೆ ಸಂಘಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು , ಈ ಮೊತ್ತದಲ್ಲಿ ಪ್ರತಿ ಲೀಟರ್‌ಗೆ 0.10 ಪೈಸೆಯಂತೆ ಹಾಲು ಕರೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಉಳಿಕೆ 0.20 ಪೈಸೆ ಯಂತ್ರಗಳ ನಿರ್ವಹಣೆ ವೆಚ್ಚಕ್ಕಾಗಿ ವಿನಿಯೋಗಿಸಲು ಒಕ್ಕೂಟದಿಂದ ನೀಡಲಾಗುತ್ತಿದೆ .

ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳನ್ನು ಸಂಘಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ .

ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ಅವರು ಮಾತನಾಡಿ , ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ರಾಸುಗಳನ್ನು ಸಾಕಾಣಿಕೆ ಮಾಡಿ ತಮ್ಮ ತಮ್ಮ ಆರ್ಥಿಕ ಜೀವನ ಮಟ್ಟವನ್ನು ಉತ್ತಮಪಡಿಸಿಕೊಳ್ಳಲು ಹಾಗೂ ಸ್ವಾವಲಂಬಿಗಳಾಗಿ ಜೀವನ ನಡೆಸಲು ಹಾರಿ ದೀಪವಾಗಿರುತ್ತದೆ ಹಾಗೂ ವೈಜ್ಞಾನಿಕವಾಗಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳಲ್ಲಿ ಹಾಲು ಕರೆಯುವ ವ್ಯವಸ್ಥೆ ಮಾಡಿರುವುದರಿಂದ ರಾಸುಗಳ ಆರೋಗ್ಯ , ಹಾಲಿನ ಗುಣಮಟ್ಟ , ಶುದ್ಧತೆ ಪರಿಣಾಮಕಾರಿಯಾಗಿ ಕಾಪಾಡಿ ಗ್ರಾಹಕರಿಗೆ ಪರಿಶುದ್ಧವಾದ ಹಾಲನ್ನು ಪೂರೈಕೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಕೋಮುಲ್ ಮಾಜಿ ನಿರ್ದೇಶಕರು ದ್ವಾರಸಂದ್ರ ಸಿ.ಮುನಿವೆಂಕಟಪ್ಪ , ಕೇತಗಾನಹಳ್ಳಿ ನಾಗರಾಜ್ ರವರು , ಉಪ ವ್ಯವಸ್ಥಾಪಕರು ( ಬಿ.ಎಂ.ಸಿ . ಇಂಜಿನಿಯರಿಂಗ್ ) ಪಿ.ಮೋಹನ್ , ವಿಸ್ತರಣಾಧಿಕಾರಿಗಳಾದ ಪಿ.ಕೆ.ನರಸಿಂಹರಾಜು , ಎನ್.ಶಂಕರ್ , ಸಂಘದ ಅಧ್ಯಕ್ಷರಾದ ನರಸಿಂಹಮೂರ್ತಿ ಹಾಗೂ ಎಲ್ಲಾ ನಿರ್ದೇಶಕರು , ಹಾಲು ಉತ್ಪಾದಕರು , ಗ್ರಾಮಸ್ಥರು, ಸಂಘದ ಸಿಬ್ಬಂದಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು