3:50 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೋಲಾರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕ ಉದ್ಘಾಟನೆ

19/12/2022, 21:27

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka.@gmail.com

ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕದ ಯೂನಿಟ್ ದರ 2.5 ಲಕ್ಷ ಘಟಕವನ್ನು ಒಕ್ಕೂಟದಿಂದ ಶೇ .100 % ರಿಯಾಯತಿ ದರದಲ್ಲಿ ಸಂಘಗಳಿಗೆ ಸರಬರಾಜು ಮಾಡಿಸಿ , ಮಿಲ್ಕಿಂಗ್ ಕಟ್ಟಡ ನಿರ್ಮಾಣಕ್ಕಾಗಿ 50,000 / – ರೂಗಳ ಸಹಾಯಧನವನ್ನು ನೀಡಿರುತ್ತಾರೆ . ಇದರ ಜೊತೆಗೆ ಒಕ್ಕೂಟದಿಂದ ಪ್ರತಿ ಲೀಟರ್‌ಗೆ 0.30 ಪೈಸೆಯಂತೆ ಸಂಘಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು , ಈ ಮೊತ್ತದಲ್ಲಿ ಪ್ರತಿ ಲೀಟರ್‌ಗೆ 0.10 ಪೈಸೆಯಂತೆ ಹಾಲು ಕರೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಉಳಿಕೆ 0.20 ಪೈಸೆ ಯಂತ್ರಗಳ ನಿರ್ವಹಣೆ ವೆಚ್ಚಕ್ಕಾಗಿ ವಿನಿಯೋಗಿಸಲು ಒಕ್ಕೂಟದಿಂದ ನೀಡಲಾಗುತ್ತಿದೆ .

ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳನ್ನು ಸಂಘಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ .

ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ಅವರು ಮಾತನಾಡಿ , ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ರಾಸುಗಳನ್ನು ಸಾಕಾಣಿಕೆ ಮಾಡಿ ತಮ್ಮ ತಮ್ಮ ಆರ್ಥಿಕ ಜೀವನ ಮಟ್ಟವನ್ನು ಉತ್ತಮಪಡಿಸಿಕೊಳ್ಳಲು ಹಾಗೂ ಸ್ವಾವಲಂಬಿಗಳಾಗಿ ಜೀವನ ನಡೆಸಲು ಹಾರಿ ದೀಪವಾಗಿರುತ್ತದೆ ಹಾಗೂ ವೈಜ್ಞಾನಿಕವಾಗಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳಲ್ಲಿ ಹಾಲು ಕರೆಯುವ ವ್ಯವಸ್ಥೆ ಮಾಡಿರುವುದರಿಂದ ರಾಸುಗಳ ಆರೋಗ್ಯ , ಹಾಲಿನ ಗುಣಮಟ್ಟ , ಶುದ್ಧತೆ ಪರಿಣಾಮಕಾರಿಯಾಗಿ ಕಾಪಾಡಿ ಗ್ರಾಹಕರಿಗೆ ಪರಿಶುದ್ಧವಾದ ಹಾಲನ್ನು ಪೂರೈಕೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಕೋಮುಲ್ ಮಾಜಿ ನಿರ್ದೇಶಕರು ದ್ವಾರಸಂದ್ರ ಸಿ.ಮುನಿವೆಂಕಟಪ್ಪ , ಕೇತಗಾನಹಳ್ಳಿ ನಾಗರಾಜ್ ರವರು , ಉಪ ವ್ಯವಸ್ಥಾಪಕರು ( ಬಿ.ಎಂ.ಸಿ . ಇಂಜಿನಿಯರಿಂಗ್ ) ಪಿ.ಮೋಹನ್ , ವಿಸ್ತರಣಾಧಿಕಾರಿಗಳಾದ ಪಿ.ಕೆ.ನರಸಿಂಹರಾಜು , ಎನ್.ಶಂಕರ್ , ಸಂಘದ ಅಧ್ಯಕ್ಷರಾದ ನರಸಿಂಹಮೂರ್ತಿ ಹಾಗೂ ಎಲ್ಲಾ ನಿರ್ದೇಶಕರು , ಹಾಲು ಉತ್ಪಾದಕರು , ಗ್ರಾಮಸ್ಥರು, ಸಂಘದ ಸಿಬ್ಬಂದಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು