8:05 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೋಲಾರ: ತೈಲ ಬೆಲೆಯೇರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ಜಾಥಾ

08/07/2021, 11:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಪಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಳ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಪ್ರತಿಭಟಿಸಿದರು . ನಗರದ ಕಾಂಗ್ರೆಸ್ ಕಚೇರಿ ಮುಂದೆ ಸೈಕಲ್ ಜಾಥಾಗೆ ಚಾಲನೆ ನೀಡಿದ ಮಾಜಿ ಸಭಾಪತಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಆರ್ . ಸುದರ್ಶನ್ ಮಾತನಾಡಿ, ತೈಲ ಬೆಲೆ ಇಳಿಸಿ ಜನಸಾಮಾನ್ಯರ ಮೇಲಿನ ಹೊರೆ ಇಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 

ತೈಲ ಮೇಲೆ ಹಾಕಿರುವ ತೆರಿಗೆ ಇಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. 

ದೇಶದಲ್ಲಿ ನಡೆಯುತ್ತಿರುವ ಆಡಳಿತದ 

ದುರವಸ್ಥೆಯಿಂದ, ಜನಸಾಮಾನ್ಯರು , ರೈತರು ತತ್ತರಿಸಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರದ ಕಾರ್ಯ ವೈಖರಿ ದುರಾಡಳಿತದಿಂದ ಕೂಡಿದೆ . ಕೋವಿಡ್ ಲಾಕ್ ಡೌನ್ ಹೇರಿದ ಸರ್ಕಾರ ಕಷ್ಟದಲ್ಲಿ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿಲ್ಲ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮಾತನಾಡಿ , ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ , ಅನಿಲ ಬೆಲೆ ಏರಿಸಿ ಬಡವರು , ಜನಸಾಮಾನ್ಯರ ಪಾಲಿಗೆ ಮಾರಕ ನಡೆ ಪ್ರದರ್ಶಿದೆ . ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ವಿರೋಧಿಸಿ ಕಾಂಗ್ರೆಸ್ ಪಕ್ಷ ಜನ ಜಾಗೃತಿಗಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದೆ ಎಂದರು .

ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ , ಕೇಂದ್ರ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ಕೆಲಸ ಮಾಡದೆ ಯುವಕರ , ರೈತರ , ಜನ ಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದೆ . ಪೆಟ್ರೋಲ್ ಏರಿಕೆಯಾಗಿದೆ . ದರ ಏರಿಕೆ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು

ಮುಂಬರುವ ಜಿಪಂ , ತಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯುತ್ತೇವೆ . ಜಿಪಂ ಯ ೩೩ ಸ್ಥಾನಗಳಲ್ಲಿ ೨೫ ಸ್ಥಾನ ಕಾಂಗ್ರೆಸ್ ವಶಪಡಿಸಿಕೊಳ್ಳುತ್ತದೆ . ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರ ಎಲ್.ಎ.ಮಂಜುನಾಥ್ , ಪಕ್ಷದ ಉಸ್ತುವಾರಿಗಳಾದ ಮಲಜಮ್ಮ , ಕಾಂಚೇಗೌಡ , ಮದನ್ ಪಾಟೀಲ್ , ಕಾರ್ಯದರ್ಶಿ ಬಲರಾಮ್ , ಊರುಬಾಗಿಲು ಶ್ರೀನಿವಾಸ್ , ಸ್ಯಾಂಡ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು , ಕೆಪಿಸಿಸಿ ಓಬಿಸಿ ಕಾರ್ಯದರ್ಶಿ ಎನ್.ಮಂಜುನಾಥ್ , ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ , ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ , ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ , ಆಪ್ ಕಾಮ್ ಮಾಜಿ ಅಧ್ಯಕ್ಷ ಗೋಪಾಲ ಗೌಡ , ಮುಖಂಡರಾದ ಉದಯಕುಮಾರ್ , ಕುಮಾರ್ , ಸೀತಿ ಮುರಳಿ ಮುಂತಾದವರು ಪಾಲ್ಗೊಂಡಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು