7:35 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೊಲೆ ಆರೋಪಿಯಿಂದ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ

16/07/2022, 17:43

ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು.

ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು