8:06 PM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು